ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸೇರಿದಂತೆ ನಕಲಿ ಆಯುರ್ವೇದ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ದೊಡ್ಡ ರಾಕೆಟ್ನ್ನು ತುಮಕೂರು ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣ ಸಂಬಂಧ ದೆಹಲಿ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂಸ್ಥೆಯೊಂದರ ಮಾಲಕರು ತಮ್ಮ ಟ್ರೇಡ್ಮಾರ್ಕ್ ದುರುಪಯೋಗವಾಗಿದೆ ಎಂದು 2025ರ ಆಗಸ್ಟ್ 14ರಂದು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಆರೋಪಿಗಳು ‘RK ಟ್ರೇಡರ್ಸ್’ ಹೆಸರಿನಲ್ಲಿ ಆನ್ಲೈನ್ ಮೂಲಕ ಗ್ರಾಹಕರಿಗೆ, ವಿಶೇಷವಾಗಿ ಯುವಕರಿಗೆ ಅಪಾಯ ಉಂಟುಮಾಡಬಹುದಾದ ನಕಲಿ ತೂಕ ಇಳಿಕೆ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರು.
ಮಾರ್ಚ್ 27ರಂದು ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿದ ಪೊಲೀಸರು, ದೊಡ್ಡ ಪ್ರಮಾಣದ ನಕಲಿ ಉತ್ಪನ್ನಗಳು, ಆಯುರ್ವೇದ ಟ್ಯಾಬ್ಲೆಟ್ಗಳು, ಕಾಸ್ಮೆಟಿಕ್ ಕ್ರೀಮ್ಗಳು ಮತ್ತು ಪೌಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಯಾವುದೇ ಅನುಮತಿ ಇಲ್ಲದೆ ಈ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು.
ಕೆಲ ಸಂದರ್ಭಗಳಲ್ಲಿ ಸಾಮಾನ್ಯ ಗೋಧಿ ಹಿಟ್ಟನ್ನೇ ‘ಸ್ಲಿಂ ಪೌಡರ್’ ಎಂದು ಪ್ಯಾಕ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯ ಪುತ್ರರೂ ಭಾಗಿಯಾಗಿದ್ದು, ಸುಮಾರು ಒಂದೂವರೆ ವರ್ಷಗಳಿಂದ RK ಟ್ರೇಡರ್ಸ್, MK ಟ್ರೇಡರ್ಸ್ ಮತ್ತು MHK ಟ್ರೇಡರ್ಸ್ ಹೆಸರಿನಲ್ಲಿ ಈ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದ ವಿಶೇಷ ತಂಡ, ಮುಖ್ಯ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಮುಂದುವರಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ
ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ
ಕೆ.ಆರ್ ಪುರದಲ್ಲಿ ರೌಡಿಶೀಟರ್ ದಾಳಿ – ಹೋರಾಟಗಾರನ ಮಗನ ಮೇಲೆ ಮಾರಣಾಂತಿಕ ಹಲ್ಲೆ, ಠಾಣೆ ಮುಂದೆ ಪ್ರತಿಭಟನೆ!
ಬೆಂಗಳೂರು: ನಗರದ ಕೆ.ಆರ್ ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತ... ಓದನ್ನು ಮುಂದುವರಿಸಿ
ಕುಟುಂಬ ಕಲಹ ದುರಂತಕ್ಕೆ ಅಂತ್ಯ: ತಾಯಿ-ಮಗ ಸಾವಿನಿಂದ ಗ್ರಾಮದಲ್ಲಿ ಆಘಾತ
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕಹಳ್ಳಿ ಕೊಪ್ಪಲು ಗ್ರ... ಓದನ್ನು ಮುಂದುವರಿಸಿ
ಹೊಳಲ್ಕೆರೆ
ಅಪಪ್ರಚಾರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ – ಚಿತ್ರದುರ್ಗದಲ್ಲಿ ಆಕ್ರೋಶ
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಮನಕಲುಕುವ ಘಟನೆ... ಓದನ್ನು ಮುಂದುವರಿಸಿ
ಕಾರವಾರ
ಮದ್ಯದ ಹಣ ವಿಚಾರ: ಅಳಿಯ ಹತ್ಯೆ – ಮಾವನಿಗೆ ಜೀವಾವಧಿ ಶಿಕ್ಷೆ
ಕಾರವಾರ: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯನನ್ನು... ಓದನ್ನು ಮುಂದುವರಿಸಿ
ಕಬ್ಬನ್ ಪಾರ್ಕ್ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ
ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ... ಓದನ್ನು ಮುಂದುವರಿಸಿ
ನಕಲಿ ನಂಬರ್ ಪ್ಲೇಟ್ ಪ್ರಕರಣ: ರಿಕ್ಕಿ ರೈ ವಿರುದ್ಧ ಕೇಸ್, ವಿದೇಶಕ್ಕೆ ಪಲಾಯನ!
ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಬಳಸಿ ವಂಚನೆ ಮಾಡಿದ ಆರೋಪದಡಿ ಮಾ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ