ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ ಬಳಸಿ ವಿಡಿಯೋ ನಿರ್ಮಿಸಿ ಯೂಟ್ಯೂಬ್ನಲ್ಲಿ ಪ್ರಸಾರ ಮಾಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಯೂಟ್ಯೂಬರ್ ಎಂ.ಡಿ. ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ತನಿಖೆಗೆ ತಡೆ ನೀಡುವುದರ ಜೊತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಮೀರ್ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ ಎಂದು ವಾದಿಸಿದರು. ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಸಾರ್ವಜನಿಕರ ನೆಮ್ಮದಿ ಹಾಳಾಗಿದೆ ಎಂದು ಹೇಗೆ ಹೇಳಬಹುದು? ಯಾರ ನೆಮ್ಮದಿ ಹಾಳಾಗಿದೆ ಎಂಬುದು ಸ್ಪಷ್ಟವಾಗಬೇಕು” ಎಂದು ಪ್ರಶ್ನಿಸಿದೆ.
ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಇದು ಸ್ವಯಂಪ್ರೇರಿತ ಪ್ರಕರಣವಲ್ಲ, ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ತಿಳಿಸಿದರು. ಕೃತಕ ಬುದ್ಧಿಮತ್ತೆ ಬಳಸಿ ತಪ್ಪು ಮಾಹಿತಿ ಹರಡುವ ಮೂಲಕ ಸಾರ್ವಜನಿಕರನ್ನು ತಪ್ಪು ದಾರಿಗೆಳೆಯಲಾಗಿದೆ ಎಂದು ಅವರು ಹೇಳಿದರು. ಸಮೀರ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿಯಲು ಅವಕಾಶ ನೀಡಬೇಕು ಎಂದು ಸರ್ಕಾರಿ ವಕೀಲರು ಮನವಿ ಮಾಡಿದರು. ಸಾರ್ವಜನಿಕರಲ್ಲಿ ಗೊಂದಲ ಮತ್ತು ದ್ವೇಷದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂಬ ಆರೋಪವನ್ನೂ ಅವರು ಪೀಠದ ಗಮನಕ್ಕೆ ತಂದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ
ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ
ಮಂಡ್ಯ: ಕೆಆರ್ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ
ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ
ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ
ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ
ಮಂಗಳೂರು
ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು
ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ
RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ
ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ
ನರಗುಂದ
ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗ... ಓದನ್ನು ಮುಂದುವರಿಸಿ