ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್ಫಾರ್ಮ್ಗೆ ನುಗ್ಗಿ 2 ವರ್ಷದ ಮಗು ಸಾವು
ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸವಣೂರು ನಿವಾಸಿಯಾದ ಹಜರತ್ ಅಲಿ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡು, ಪ್ರಾಥಮಿಕ ಚಿಕಿತ್ಸೆ ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಈ ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಬಂಕಾಪುರದ ವಾಸುದೇವ (44), ಹರ್ಷಾ (6) ಮತ್ತು ಕಾವ್ಯಾಂಜಲಿ (39) ಸೇರಿದ್ದಾರೆ. ಮಾಹಿತಿಯ ಪ್ರಕಾರ, ಹಾವೇರಿಯಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ನಾನ್ಸ್ಟಾಪ್ ಕೆಎಸ್ಆರ್ಟಿಸಿ ಬಸ್ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಪ್ಲಾಟ್ಫಾರ್ಮ್ಗೆ ನುಗ್ಗಿದೆ. ಪರಿಣಾಮವಾಗಿ ಅಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಯನ್ನು ತೋರಿಸಿದೆ. ಘಟನೆ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು
ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ
ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ
ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ
ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು
ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ
ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ
‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ
ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ
ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ
ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ
ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ
ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ
ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ
ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ
ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು
ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ
ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್
ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ