ಪಿಯುಸಿ ಎಕ್ಸಾಂಗೆ ಕೌಂಟ್ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಅಕ್ರಮ ತಡೆಯಲು ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿವೆ. ಮಾರ್ಚ್ 17ರವರೆಗೆ ನಡೆಯುವ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆ ನಡೆಯಲಿದೆ.
ಕಟ್ಟುನಿಟ್ಟಿನ ಭದ್ರತಾ ಕ್ರಮಗಳು
ಪರೀಕ್ಷೆಗಳು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಯಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ:
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಸಮೀಪದ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕ್ರಮ
ಹಿಂದಿನ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ಪೊಲೀಸ್ ವಿಶೇಷ ನಿಗಾ
ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ತಡೆಯಲು ವಿಶೇಷ ಪೊಲೀಸ್ ತಂಡ ರಚನೆ
ವೆಬ್ ಕ್ಯಾಸ್ಟಿಂಗ್ ಮೂಲಕ ಪರೀಕ್ಷಾ ಮೇಲ್ವಿಚಾರಣೆ; ಪ್ರತಿ ಜಿಲ್ಲೆಯಲ್ಲಿ ಡಿಸಿ ಹಾಗೂ ಎಸ್ಪಿ ಮೇಲ್ವಿಚಾರಣೆ
ಪ್ರಶ್ನೆಪತ್ರಿಕೆ ರವಾನೆಗೆ ಬಿಗಿ ಪೊಲೀಸ್ ಭದ್ರತೆ ಮತ್ತು ವಿಡಿಯೋ ಚಿತ್ರೀಕರಣ
ನಿಗದಿತ ಸಮಯಕ್ಕಿಂತ ಮೊದಲು ಪ್ರಶ್ನೆಪತ್ರಿಕೆ ತೆರೆಯಲು ಅವಕಾಶ ಇಲ್ಲ; ಉಲ್ಲಂಘನೆಗೆ ಕಾನೂನು ಕ್ರಮ
ವಿದ್ಯಾರ್ಥಿಗಳು, ಸಿಬ್ಬಂದಿ, ಅಧಿಕಾರಿಗಳಿಗೆ ಮೊಬೈಲ್ ಫೋನ್ ನಿಷೇಧ
ವಾಚ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ
ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್ ಮತ್ತು ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ
ಫೆಬ್ರವರಿ 28 – ಕನ್ನಡ, ಅರೇಬಿಕ್
ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3 – ಇಂಗ್ಲೀಷ್
ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5 – ಇತಿಹಾಸ
ಮಾರ್ಚ್ 6 – ಭೌತಶಾಸ್ತ್ರ
ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10 – ಅರ್ಥಶಾಸ್ತ್ರ
ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12 – ಹಿಂದಿ
ಮಾರ್ಚ್ 13 – ರಾಜ್ಯಶಾಸ್ತ್ರ
ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17 – ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ಪರೀಕ್ಷೆಗಳು ಯಾವುದೇ ಅಕ್ರಮವಿಲ್ಲದೆ ಸುಗಮವಾಗಿ ನಡೆಯಲು ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ... ಓದನ್ನು ಮುಂದುವರಿಸಿ
ಅರ್ಜುನ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ: JEE ಮೇನ್ʼನಲ್ಲಿ 99+ ಶೇ. ಅಂಕಗಳೊಂದಿಗೆ ಧಾರವಾಡಕ್ಕೆ ಕೀರ್ತಿ
ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್... ಓದನ್ನು ಮುಂದುವರಿಸಿ
ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಫೆಬ್ರವರಿ 17: ರಾಜ್ಯದ ದ್ವಿತೀಯ ಪಿಯುಸಿ ಹಾಗೂ ಎಸ್ಎ... ಓದನ್ನು ಮುಂದುವರಿಸಿ
ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲ... ಓದನ್ನು ಮುಂದುವರಿಸಿ
ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !
ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ
ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ
ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ
ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ
ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ
ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ