ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳ ಮೂಲದ 36 ವರ್ಷದ ಶರಣ್ಯ ನಾಪತ್ತೆಯಾಗಿರುವ ಪ್ರಕರಣದಲ್ಲಿ ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೂ ಮುಂದುವರಿದಿದೆ. ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದಲ್ಲಿರುವ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ, ಆನ್ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ಒಬ್ಬರೇ ಚಾರಣಕ್ಕೆ ತೆರಳಿದ್ದರು. ಈ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಇರುವ ಹಿನ್ನೆಲೆ, ಆಕೆಯನ್ನು ಇತರ ಪ್ರವಾಸಿಗರೊಂದಿಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಬೆಟ್ಟಕ್ಕೆ ತೆರಳಿದ್ದ ಇತರರು ಸುರಕ್ಷಿತವಾಗಿ ಹಿಂತಿರುಗಿದರೂ ಶರಣ್ಯ ಮಾತ್ರ ಮರಳಿ ಬಾರದ ಹಿನ್ನೆಲೆ, ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೊದಲ ದಿನದಿಂದಲೇ ರಾತ್ರಿ ತನಕ ಶೋಧ ಕಾರ್ಯ ನಡೆದಿದ್ದು, ಇದೀಗ ನಾಲ್ಕನೇ ದಿನಕ್ಕೂ ಮುಂದುವರಿದಿದೆ. ಕೊಡಗು ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ರಾಘವೇಂದ್ರ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯ ನಿರ್ವಹಿಸುತ್ತಿವೆ.
ಜಿಲ್ಲಾ ಎಸ್ಪಿ ಬಿಂದುಮಣಿ ಮಾತನಾಡಿ, ಶರಣ್ಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈವರೆಗೆ ಯಾವುದೇ ಸುಳಿವು ಸಿಗದಿರುವುದು ಆತಂಕ ಹೆಚ್ಚಿಸಿದೆ. ಶೋಧ ಕಾರ್ಯಕ್ಕಾಗಿ 5 ವಿಶೇಷ ತಂಡಗಳನ್ನು ರಚಿಸಲಾಗಿದ್ದು, 2 ಪೊಲೀಸ್ ತಂಡಗಳು ಹಾಗೂ 3 ಅರಣ್ಯ ಇಲಾಖೆ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಡ್ರೋನ್ ಹಾಗೂ ಶ್ವಾನದಳದ ಸಹಾಯದಿಂದ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಕರ್ನಾಟಕಕ್ಕೆ ಕೇಂದ್ರ ಅನ್ಯಾಯ – ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾ... ಓದನ್ನು ಮುಂದುವರಿಸಿ
“ಜನರ ಪ್ರೀತಿಯೇ ದೊಡ್ಡ ಗೌರವ” – ಡಾಕ್ಟರೇಟ್ ತಿರಸ್ಕರಿಸಿದ ಬೊಮ್ಮಾಯಿ
ಬೆಂಗಳೂರು: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಸವರಾ... ಓದನ್ನು ಮುಂದುವರಿಸಿ
“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ
ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ
ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ
ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ
“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ
ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ
ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ದಾವಣಗೆರೆ: ಎಲ್ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ
ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ
ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ
“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ
ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ
ಆಧಾರಿತ RF ಟೆಕ್ : ಬೆಂಗಳೂರಿನ ಸ್ಟಾರ್ಟ್ಅಪ್ನಿಂದ ‘ಡಾರ್ಕ್ ಶಿಪ್ಪಿಂಗ್’ ಪತ್ತೆ ಮಾಡುವ ಹೊಸ ತಂತ್ರಜ್ಞಾನ
ಬೆಂಗಳೂರು: ಪಶ್ಚಿಮ ಏಷ್ಯಾ ಸಂಕಷ್ಟದ ನಡುವೆ ಕಳ್ಳ ಸಾಗಣೆ, ಅಕ್ರಮ... ಓದನ್ನು ಮುಂದುವರಿಸಿ
IndiGo ವಿಮಾನದಲ್ಲಿ ‘ಬಾಂಬ್’ ಸಂದೇಶ: 183 ಪ್ರಯಾಣಿಕರ ತುರ್ತು ಇಳಿಕೆ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು... ಓದನ್ನು ಮುಂದುವರಿಸಿ