ಉದ್ಯಮಿ ಕಾಲಿಗೆ ಬೀಳುವಂತೆ ಬೆದರಿಕೆ ಆರೋಪ: HAL Police Station ಇನ್ಸ್ಪೆಕ್ಟರ್ ವಿರುದ್ಧ Karnataka High Courtಗೆ ಪ್ರಮಾಣಪತ್ರ
ಬೆಂಗಳೂರು: ಉದ್ಯಮಿ ಅರವಿಂದ್ ರೆಡ್ಡಿ ಅವರ ಕಾಲಿಗೆ ಬೀಳುವಂತೆ HAL Police Station ಇನ್ಸ್ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ Karnataka High Courtಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಚ್ಎಎಲ್ ಠಾಣೆ ಪೊಲೀಸರು ವೈಶಾಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ ರದ್ದುಪಡಿಸುವಂತೆ ಹಾಗೂ ಠಾಣಾ ಇನ್ಸ್ಪೆಕ್ಟರ್ ಅಜರುದ್ದೀನ್ ವಿರುದ್ಧ ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ವೈಶಾಕ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್ಪೆಕ್ಟರ್ ಅಜರುದ್ದೀನ್ ಮತ್ತು ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳಾಗಿ ಉಲ್ಲೇಖಿಸಲಾಗಿದೆ. ಅರ್ಜಿಯ ವಿಚಾರಣೆ ವೇಳೆ ವೈಶಾಕ್ ಪರ ವಕೀಲರು ಹಾಜರಾಗಿ, ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚನೆ ನೀಡಿದ್ದರೂ, ಇನ್ಸ್ಪೆಕ್ಟರ್ ಅಜರುದ್ದೀನ್ ಪ್ರಕರಣದಲ್ಲಿ ಹೆಸರಿಸಲ್ಪಟ್ಟ ನಟಿಯನ್ನೂ ಠಾಣೆಗೆ ಕರೆಸಿದ್ದು, ಅರವಿಂದ್ ರೆಡ್ಡಿ ಕಾಲಿಗೆ ಬೀಳುವಂತೆ ಸೂಚಿಸಿದ್ದಾರೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.
ಪ್ರಮಾಣಪತ್ರವನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣ ಸಂಬಂಧ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸುವುದಾಗಿ ಹೇಳಿ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು. ಇನ್ನೊಂದೆಡೆ, ಜನವರಿಯಲ್ಲಿ ಆರೋಪಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ತನ್ನ ಗ್ಯಾರೇಜ್ಗೆ ಕಳುಹಿಸಬೇಕು. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಅರವಿಂದ್ ರೆಡ್ಡಿ ದೂರು ನೀಡಿದ ಹಿನ್ನೆಲೆಯಲ್ಲಿ ಎಚ್ಎಎಲ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ಫೆಬ್ರವರಿ 2ರಂದು ನಟಿಯ ಮನೆಯಲ್ಲಿಯೇ ವೈಶಾಕ್ ಅವರನ್ನು ಬಂಧಿಸಲಾಗಿತ್ತು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ನೆಲಮಂಗಲ
ರಾಜತಾಂತ್ರಿಕ ಪ್ರಯತ್ನ ಫಲ: ಟೊರಾಂಟೋದಲ್ಲಿ ಹತ್ಯೆಯಾದ ಚಂದನ್ ಕುಮಾರ್ ಶರೀರ ತಾಯ್ನಾಡಿಗೆ ಆಗಮ
ನೆಲಮಂಗಲ: ಕೆನಡಾದ ಟೊರೊಂಟೊ ನಗರದಲ್ಲಿ ಫೆಬ್ರವರಿ 7ರಂದು ನಡೆದ ಶೂ... ಓದನ್ನು ಮುಂದುವರಿಸಿ
ಸಿದ್ದರಾಮಯ್ಯ ಹೊರತಾಗಿ ಯಾರೇ ಸಿಎಂ ಆದರೂ ಸರ್ಕಾರ ನಿರ್ವಹಣೆ ಸಾಧ್ಯವಿಲ್ಲ: ಅಶೋಕ್ ಪಟ್ಟಣ್
ಕೊಪ್ಪಳ: “ಸಿದ್ದರಾಮಯ್ಯ ಮಾತ್ರವೇ ಸರ್ಕಾರವನ್ನು ಸಮರ್ಪಕವಾಗಿ ನಿರ... ಓದನ್ನು ಮುಂದುವರಿಸಿ
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ – ಕಿಡ್ನಿ ಝೀರೋ ಟ್ರಾಫಿಕ್ಗೆ ರವಾನೆ
ವಿಜಯಪುರ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಂಗಾಂಗ ದಾನದ ಮೂಲಕ ಜೀವ ರ... ಓದನ್ನು ಮುಂದುವರಿಸಿ
ಪರಿಹಾರ ಹಣ ಕ್ಲೈಮ್ ಆಗದೇ ಚಿಕ್ಕಮಗಳೂರು ಬಸ್ಗಳು ಸೀಜ್ – ಪ್ರಯಾಣಿಕರು ನಡುರಸ್ತೆಗೆ ಇಳಿದರು
ಹಾಸನ: ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೊರಟಿದ್ದ ಚಿಕ್ಕಮಗಳೂರು ಡ... ಓದನ್ನು ಮುಂದುವರಿಸಿ
ಶಿಕ್ಷಕರ ನಿರ್ಲಕ್ಷ್ಯ: ಬಾಲಕಿ ಬೆರಳು ಕಟ್ – ಬಿಇಓ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್
ತುಮಕೂರು: ಜಿಲ್ಲಾ ಗ್ರಾಮಾಂತರ ಗೂಳೂರು ಗ್ರಾಮದ ಸರ್ಕಾರಿ ಶಾಲೆಯಲ್... ಓದನ್ನು ಮುಂದುವರಿಸಿ
89 ಪಿಜಿಗಳಿಗೆ ₹61 ಸಾವಿರ ದಂಡ, 19 ಕಿಚನ್ಗಳಿಗೆ ಬೀಗ – ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ
ಬೆಂಗಳೂರು : ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ (PG) ವಸತಿಗೃಹಗಳ ವಿ... ಓದನ್ನು ಮುಂದುವರಿಸಿ
BPL ಕಾರ್ಡ್ದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.. 4 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ
ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವವರು ಹಾಗೂ ಸರ್ಕಾರಿ ನೌಕರರ... ಓದನ್ನು ಮುಂದುವರಿಸಿ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: Greater Bengaluru Authority ಆದೇಶ
ಬೆಂಗಳೂರು : ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ನ... ಓದನ್ನು ಮುಂದುವರಿಸಿ
ರಬಕವಿ ಬನಹಟ್ಟಿ
“ಸಿಎಂ ಅಧಿಕಾರದಲ್ಲಿ ಕಳೆಯುವ ದಿನಗಳಿಗಿಂತ, ಜನರಿಗೆ ನೀಡಿದ ಫಲಿತಾಂಶವೇ ಮುಖ್ಯ: ಬಿವೈ ವಿಜಯೇಂದ್ರ”
ಬಾಗಲಕೋಟೆ: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬನಹಟ್ಟಿ ನ... ಓದನ್ನು ಮುಂದುವರಿಸಿ
ನಾಳೆ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತ – ಬೆಸ್ಕಾಂ ಎಚ್ಚರಿಕೆ
ಬೆಂಗಳೂರು: ಬೆಸ್ಕಾಂ ನಾಳೆ ಫೆಬ್ರವರಿ 13ರಂದು ತುರ್ತು ನಿರ್ವಹಣಾ... ಓದನ್ನು ಮುಂದುವರಿಸಿ